ವಾಲ್ಮೀಕಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ FIRಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗೆ ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಕೋರ್ಟ್ ತಡೆ ನೀಡಿದೆ.

- Advertisement -


ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್ ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು. ಇದೀಗ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ ತಡೆ ನೀಡಿ ಆದೇಶ ಹೊರಡಿಸಿದೆ.



Join Whatsapp