ವಂದೇ ಭಾರತ್  ರೈಲು ಎಮ್ಮೆಗೆ ಡಿಕ್ಕಿ: ಎಮ್ಮೆಗಳ ಮಾಲೀಕರ ವಿರುದ್ಧ ಎಫ್ ಐಆರ್

Prasthutha|

ನವದೆಹಲಿ: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮುಂಭಾಗಕ್ಕೆ ಹಾನಿಯಾಗಲು ಕಾರಣವಾದ  ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ ನ ರೈಲ್ವೆ ರಕ್ಷಣಾ ಪಡೆ (ಆರ್ ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಚಾಲನೆ ನೀಡಿದ ಸೆಮಿ ಹೈಸ್ಪೀಡ್ ‘ವಂದೇ ಭಾರತ್’ ರೈಲು ಎಮ್ಮೆಗಳಿಗೆ   ಢಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು.

ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ರೈಲು ಗುರುವಾರ ಬೆಳಿಗ್ಗೆ 11.15 ರ ಸುಮಾರಿಗೆ ಅಹಮದಾಬಾದ್ ಬಳಿ ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp