ಈಶ್ವರಪ್ಪ ತಕ್ಷಣ ರಾಜೀನಾಮೆ ನೀಡುವಂತೆ ಒತ್ತಾಯಿಸಿ ವಿವಿಧ ಪಕ್ಷ , ಸಂಘಟನೆಗಳ ಪ್ರತಿಭಟನೆ

Prasthutha|

ಚಿಕ್ಕಮಗಳೂರು : ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ತಕ್ಷಣ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಚಿಕ್ಕಮಗಳೂರಲ್ಲಿ ವಿವಿಧ ಪಕ್ಷ ಸಂಘಟನೆಗಳಿಂದ  ಪ್ರತಿಭಟನೆ ನಡೆಯಿತು .

- Advertisement -

ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷ, ಕಾಂಗ್ರೆಸ್ ,ಜೆಡಿಎಸ್ ,ರೈತಸಂಘ ,ದಲಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸಚಿವ ಈಶ್ವರಪ್ಪನವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು .

ಸಚಿವ ಕೆ. ಎಸ್. ಈಶ್ವರಪ್ಪ ಶೇ.40 ರಷ್ಟು  ಕಮಿಷನ್ ಕೇಳಿದ್ದಾರೆಂಬ ಆರೋಪದ ಮೇಲೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ,  ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿದರು .

- Advertisement -

ರಾಜ್ಯ ಸರ್ಕಾರ ಶೇ.40 ರಷ್ಟು  ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ಪ್ರಧಾನಿಗಳು, ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ದೂರಿದರು .



Join Whatsapp