ರಸ್ತೆ ಕಾಮಗಾರಿಗೆ ವೀಣಾ ಅಚ್ಚಯ್ಯ ಭೂಮಿ ಪೂಜೆ

Prasthutha|

ಮಡಿಕೇರಿ: ಬಸಪ್ಪ ಕಾಲೋನಿ ಧನುಗಾಲ ಮತ್ತು ಮಾಯಮುಡಿಯ ಕಲ್ಲುಕೋಡು ಪೈಸಾರಿಯಲ್ಲಿ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭೂಮಿ ಪೂಜೆ ನೆರವೇರಿಸಿದರು. ಶಾಸಕರ ಅನುದಾನ ಅಡಿಯಲ್ಲಿ 5 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಿಸುವ ಉದ್ದೇಶವನ್ನು ಹೊಂದಿದೆ.

- Advertisement -

ನಂತರ ಮಾತನಾಡಿದ ವೀಣಾ ಅಚ್ಚಯ್ಯ, ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ಸದ್ಬಳಕೆಯಾಗುವಂತೆ ನೋಡಿಕೊಳ್ಳಲು ಸಲಹೆ ನೀಡಿದರು. ಈ ಸಂದರ್ಭ ಗ್ರಾಂ.ಪಂಚಯತ್ ಸದಸ್ಯರು, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Join Whatsapp