ಮರವೂರು ಸೇತುವೆಯಲ್ಲಿ ವಾಹನ ಸಂಚಾರ ಪುನಾರಂಭ

Prasthutha|

ಮಂಗಳೂರು, ಜು.30: ಬಿರುಕುಬಿಟ್ಟ ಹಿನ್ನೆಲೆಯಲ್ಲಿ ಮರವೂರು ಸೇತುವೆಯಲ್ಲಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಶುಕ್ರವಾರದಿಂದ ಪುನಾರಂಭಗೊಂಡಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ತಿಂಗಳ ಹಿಂದೆ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಮಾರ್ಗದ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಗುರುವಾರ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ಸೇತುವೆ, ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ.

- Advertisement -

ಶುಕ್ರವಾರ ಮಧ್ಯಾಹ್ನ ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್ಗಳು ತೆಂಗಿನ ಕಾಯಿ ಒಡೆಯುವ ಮೂಲಕ ಸೇತುವೆಯ ಮೇಲೆ ವಾಹನ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ದಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp