ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ

Prasthutha|

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ.
ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು.

ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

- Advertisement -

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ.



Join Whatsapp
Exit mobile version