Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ. ವಿವೇಕಾನಂದ ಜಯ

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ. ವಿವೇಕಾನಂದ ಜಯ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಬಿಜೆಪಿಯ ವಿವೇಕಾನಂದ ವಿರುದ್ಧ ಸೋಲು ಕಂಡಿದ್ದಾರೆ.

ವಿಧಾನ ಪರಿಷತ್ತಿಗೆ ನಡೆದಿದ್ದಂತ ಚುನಾವಣೆಯ ಮತಗಳ ಏಣಿಕೆ ಕಾರ್ಯ ನಡೆಯುತ್ತಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಅಭ್ಯರ್ಥಿ ವಿವೇಕಾನಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸೋಲು ಕಂಡಿದ್ದಾರೆ.

ಮತ ಎಣಿಕೆಯ ಆರಂಭದಿಂದಲ್ಲೂ ವಿವೇಕಾನಂದ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಗೆಲುವಿನ ಖೋಟಾ ತಲುಪಿದ ಕೂಡಲೇ ಅವರ ಜಯ ಅಧಿಕೃತವಾಗಿ ದಾಖಲಾಯಿತು. ಸತತವಾಗಿ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದ ಮರಿತಿಬ್ಬೇಗೌಡ ಅವರಿಗೆ ಈ ಸೋಲಿನಿಂದ ತೀವ್ರ ಮುಖಭಂಗವಾಗಿದೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ವಿವೇಕಾನಂದ ಮೂರುವರೆ ಸಾವಿರಕ್ಕೂ ಹೆಚ್ಚು ಬಹುಮತಗಳಿಂದ ಗೆಲುವು ಸಾಧಿಸಿದ್ದಾರೆ.

Join Whatsapp
Exit mobile version