ಸಿದ್ದರಾಮಯ್ಯ, ಡಿಕೆಶಿಗೆ ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ: ಯತ್ನಾಳ್ ಸವಾಲು

Prasthutha|

ವಿಜಯಪುರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ.

- Advertisement -

ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಕೊರೊನಾ ಸಂದರ್ಭದಲ್ಲಿ ಮಾಡಿದ ಭ್ರಷ್ಟಾಚಾರ ಹೊರಗೆ ಬರಲಿ. ಭ್ರಷ್ಟಾಚಾರ ಮಾಡಿದವರು ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ಇಲ್ಲ ಎಂದು ಬಿಜೆಪಿ ಪಾದಯಾತ್ರೆಗೆ ಟಾಂಗ್ ನೀಡಿದರು.


ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್ ಮೆಂಟ್ ಇದೆ. ಅಡ್ಜೆಸ್ಟ್ ಮೆಂಟ್ ಇದೆ ಅನ್ನೋದು 100% ನಿಜ. ಭೋವಿ, ತಾಂಡಾ ನಿಗಮಗಳ ತನಿಖೆ ಆಗಲಿ. ಭ್ರಷ್ಟ ಕುಟುಂಬವನ್ನ ಬಿಜೆಪಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಡಿ. ಸಿದ್ದರಾಮಯ್ಯ, ಡಿಕೆಶಿಗೆ ಧಮ್, ತಾಕತ್ ಇದ್ದರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಸವಾಲೆಸೆದರು.



Join Whatsapp