Home ಟಾಪ್ ಸುದ್ದಿಗಳು ಸಿದ್ದರಾಮಯ್ಯ, ಡಿಕೆಶಿಗೆ ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ: ಯತ್ನಾಳ್ ಸವಾಲು

ಸಿದ್ದರಾಮಯ್ಯ, ಡಿಕೆಶಿಗೆ ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ: ಯತ್ನಾಳ್ ಸವಾಲು

ವಿಜಯಪುರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಕೊರೊನಾ ಸಂದರ್ಭದಲ್ಲಿ ಮಾಡಿದ ಭ್ರಷ್ಟಾಚಾರ ಹೊರಗೆ ಬರಲಿ. ಭ್ರಷ್ಟಾಚಾರ ಮಾಡಿದವರು ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ಇಲ್ಲ ಎಂದು ಬಿಜೆಪಿ ಪಾದಯಾತ್ರೆಗೆ ಟಾಂಗ್ ನೀಡಿದರು.


ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್ ಮೆಂಟ್ ಇದೆ. ಅಡ್ಜೆಸ್ಟ್ ಮೆಂಟ್ ಇದೆ ಅನ್ನೋದು 100% ನಿಜ. ಭೋವಿ, ತಾಂಡಾ ನಿಗಮಗಳ ತನಿಖೆ ಆಗಲಿ. ಭ್ರಷ್ಟ ಕುಟುಂಬವನ್ನ ಬಿಜೆಪಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಡಿ. ಸಿದ್ದರಾಮಯ್ಯ, ಡಿಕೆಶಿಗೆ ಧಮ್, ತಾಕತ್ ಇದ್ದರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಸವಾಲೆಸೆದರು.

Join Whatsapp
Exit mobile version