ವಿಜಯೇಂದ್ರ ಬಹಳ ದಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇರುವುದಿಲ್ಲ: ಸಚಿವ ಎಂ.ಬಿ.ಪಾಟೀಲ್ ಭವಿಷ್ಯ

Prasthutha|

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಹಳ ದಿನಗಳ ಕಾಲ ಆ ಸ್ಥಾನದಲ್ಲಿ ಇರುವುದಿಲ್ಲ. ಸ್ವಲ್ಪ ದಿನಗಳಲ್ಲೇ ಅವರನ್ನು ಕೆಳಗೆ ಇಳಿಸುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಭವಿಷ್ಯ ನುಡಿದಿದ್ದಾರೆ.

- Advertisement -


ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮ್ಮ ತಂದೆಯನ್ನು ಭ್ರಷ್ಟಾಚಾರದಲ್ಲಿ ಸಿಲುಕಿಸಿದ್ದು ಹೇಗೆ?. ಏನೇನೋ ಮಾಡಿ ಅವರ ರಾಜೀನಾಮೆ ಕೊಡಿಸಿದರಲ್ಲ. ಬಿಜೆಪಿಯವರೇ ಅವರನ್ನು ಕೆಳಗೆ ಇಳಿಸಿದ್ದು. ಮೊದಲು ವಿಜಯೇಂದ್ರ ಇದನ್ನು ತಿಳಿಯಲಿ ಎಂದು ಹೇಳಿದರು.


ವಿಜಯೇಂದ್ರರನ್ನು ಬಿಜೆಪಿಯವರು ಒಪ್ಪಿದ್ದಾರಾ?. ಯತ್ನಾಳ್, ರಮೇಶ್ ಜಾರಕಿಹೊಳಿ, ಅಶ್ವತ್ ನಾರಾಯಣ, ಆರ್.ಅಶೋಕ್ ಸೇರಿದಂತೆ ಯಾರು ಕೂಡ ವಿಜಯೇಂದ್ರರನ್ನು ಒಪ್ಪಿಲ್ಲ ಎಂದು ಪಾಟೀಲ್ ಟೀಕಿಸಿದರು.



Join Whatsapp