ಸರಕಾರಿ ಕೆಲಸಕ್ಕೆ ಅಡ್ಡಿ| ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ದೂರು ನೀಡಿದ ಗ್ರಾಮ ಲೆಕ್ಕಿಗ

Prasthutha|

 ದಾವಣಗೆರೆ: ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗರೊಬ್ಬರು ನ್ಯಾಮತಿ ಠಾಣೆಯಲ್ಲಿ ದೂರು ನೀಡಿದ್ದು, ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ರೇಣುಕಾಚಾರ್ಯ ಸರಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್‌.ಪ್ರಶಾಂತ್‌ಕುಮಾರ್‌ ಎಂಬುವವರು ದೂರು ಸಲ್ಲಿಸಿದ್ದಾರೆ.

ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ.

Join Whatsapp