ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ: ದೂರು ನೀಡಿದ ವಿನಯ್ ಗುರೂಜಿ

Prasthutha|

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಆಡಲಾಗುತ್ತಿದೆ ಎಂದು ಆರೋಪಿಸಿ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ದೂರು ನೀಡಿದ್ದಾರೆ.

- Advertisement -


ತಮ್ಮ ಪಿಆರ್ ಓ ಮೂಲಕ ವಿನಯ್ ಗುರೂಜಿ ದೂರು ನೀಡಿದ್ದು, ಕೆಪಿಸಿಸಿ ಆನೇಕಲ್ ವಿಭಾಗ ಸೋಷಿಯಲ್ ಮೀಡಿಯಾ ವಿಂಗ್ ಸೇರಿ ಸುಮಾರು 22 ಟ್ರೋಲ್ ಪೇಜ್ ಗಳ ಮೇಲೆ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಾಲಿಡುವ ದೃಶ್ಯವನ್ನು ಪೋಸ್ಟ್ ಮಾಡಿ ಅದರಲ್ಲಿ ಕೆಟ್ಟದಾಗಿ ಕಾಮೆಂಟ್ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖವಾಗಿದೆ.

Join Whatsapp