ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು

Prasthutha|

ಬೆಂಗಳೂರು: ಯೋಗೀಶ್ ಗೌಡ ಹತ್ಯೆಗೆ ಸಂಬಂಧಿಸಿದಂತೆ ಧಾರವಾಡ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

- Advertisement -


ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ 9 ತಿಂಗಳುಗಳಿಂದ ಕುಲಕರ್ಣಿ ಬೆಳಗಾವಿಯ ಹಿಂಡಲಜಾ ಜೈಲಿನಲ್ಲಿದ್ದಾರೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಆದರೆ ಸಾಕ್ಷ್ಯ ನಾಶದ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ಧಾರವಾಡ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ಆದೇಶಿಸಿರುವುದರಿಂದ ಜಾಮೀನು ದೊರೆತರೂ ಊರಿಗೆ ತೆರಳುವಂತಿಲ್ಲ.

Join Whatsapp