ಪ್ರವಾದಿ ನಿಂದನೆ ಖಂಡಿಸಿ ಪ್ರತಿಭಟನೆ ವೇಳೆ ಹಿಂಸಾಚಾರ: 227 ಮಂದಿಯನ್ನು ಬಂಧಿಸಿದ ಯುಪಿ ಪೊಲೀಸರು

Prasthutha|

ಲಕ್ನೋ: ಪ್ರವಾದಿ ನಿಂದನೆಗೈದವರನ್ನು ಬಂಧಿಸುವಂತೆ ಒತ್ತಾಯಿಸಿ ಶುಕ್ರವಾರ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದ ಬಳಿಕ ಒಟ್ಟು 227 ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -


68 ಮಂದಿಯನ್ನು ಪ್ರಯಾಗ್ ರಾಜ್ ನಲ್ಲಿ ಮತ್ತು 50 ಮಂದಿಯನ್ನು ಹತ್ರಾಸ್ ನಲ್ಲಿ ಬಂಧಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಸಹರಾನ್ ಪುರದಲ್ಲಿ 48, ಅಂಬೇಡ್ಕರ್ ನಗರದಲ್ಲಿ 28, ಮೊರಾದಾಬಾದ್ ನಲ್ಲಿ 25 ಮತ್ತು ಫಿರೋಜಾಬಾದ್ ನಲ್ಲಿ 8 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.


ರಾಜ್ಯದ ಶಾಂತಿ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಬಂಧನ ನಡೆದಿದೆ.

Join Whatsapp