ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಐಪಿಎಲ್ ನ 14ನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಕೊಹ್ಲಿಯ ಕೈಗೆ ಗಾಯವಾಗಿತ್ತು.
ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಕೊಹ್ಲಿಯ ಹೆಬ್ಬರಳಿನ ಭಾಗಕ್ಕೆ ಗಾಯವಾಗಿದೆ. ಅತ್ತ ಚೆಂಡು ತಾಗುತ್ತಿದ್ದಂತೆ ಕೊಹ್ಲಿ ನೋವಿನಿಂದ ಕುಸಿದು ಕೂತಿದ್ದರು. ಈ ಗಾಯದ ಕಾರಣ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು.
ಇದೀಗ ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಆರ್ ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಮಾಹಿತಿ ನೀಡಿದ್ದಾರೆ. ಕೊಹ್ಲಿಗೆ ಉಂಟಾಗಿರುವ ಗಾಯವು ಗಂಭೀರವೇನಲ್ಲ. ಅಲ್ಲದೆ ಅವರು ಫೈನ್ ಆಗಿದ್ದು, ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಈ ಪಂದ್ಯಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದ್ದು, ಅದರೊಳಗೆ ಅವರ ಬೆರಳಿನ ಗಾಯವು ಸಂಪೂರ್ಣ ಗುಣಮುಖವಾಗುವ ನಿರೀಕ್ಷೆಯಿದೆ.
ಇನ್ನು ಈ ಬಾರಿಯ ಐಪಿಎಲ್ನಲ್ಲಿ ಮೂರು ಪಂದ್ಯಗಳನ್ನಾಡಿರುವ ಆರ್ಸಿಬಿ ತಂಡವು 2 ಜಯ ಹಾಗೂ ಒಂದು ಸೋಲನುಭವಿಸಿದೆ.