ಬಿಜೆಪಿ ಸೇರುವಾಗ ಮುಂಬೈನಲ್ಲಿ ಕಳೆದ ದಿನಗಳ ಬಗ್ಗೆ ‘ಬಾಂಬೆ ದಿನಗಳು’ ಪುಸ್ತಕ ಬರೆಯುತ್ತೇನೆ : ಎಚ್. ವಿಶ್ವನಾಥ್

Prasthutha|

ಹುಬ್ಬಳ್ಳಿ : ಜೆಡಿಎಸ್ ತೊರೆದು ಬಿಜೆಪಿಗೆ ಬರುವಾಗ ಮುಂಬೈನಲ್ಲಿ ಕಳೆದ ದಿನಗಳ ಬಗ್ಗೆ ‘ಬಾಂಬೆ ದಿನಗಳು’ ಎಂಬ ಪುಸ್ತಕ ಬರೆಯಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

- Advertisement -

ಯಡಿಯೂರಪ್ಪ ಅವರ ಈಗಿನ ಪರಿಸ್ಥಿತಿ ನೋಡಿದರೆ, ನಾಲಿಗೆ ಕಳೆದುಕೊಂಡ ನಾಯಕ ಎಂದು ತಲೆಬರಹ ಕೊಡಬಹುದು ಎಂದೂ ಅವರು ವ್ಯಂಗ್ಯವಾಡಿದರು.

ಯಡಿಯೂರಪ್ಪ ನನಗಿಂತ ದೊಡ್ಡವರು, ಅವರಿಗೆ ಅಧಿಕಾರದಾಸೆ ಇರುವಾಗ, ನನಗೆ ಇರಬಾರದಾ? ನಾನು ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಿಲ್ಲ, ಆದರೆ ಜೈಲಿಗೆ ಹೋಗಬೇಕಾದ ಯೋಗೇಶ್ವರ್ ಸಚಿವರಾಗಿದ್ದಾರೆ. ಯೋಗೇಶ್ವರ್ ಕೆಲ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ ಎಂದು ವಿಶ್ವನಾಥ್ ವಾಗ್ದಾಳಿ ಮಾಡಿದ್ದಾರೆ.

- Advertisement -

ನಾನೊಬ್ಬ ಲೇಖಕ, ಬರವಣಿಗೆ ಮೂಲಕ ಎಲ್ಲಾ ಬಹಿರಂಗ ಪಡಿಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Join Whatsapp