ಇಂದಿಗೂ ಅಲ್ಪಸಂಖ್ಯಾತರು ರಾಷ್ಟ್ರೀಯ ಮುಖ್ಯವಾಹಿನಿಗೆ ಬಂದಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ

Prasthutha|

ಕಾರವಾರ: ಇಂದಿಗೂ ಅಲ್ಪಸಂಖ್ಯಾತರು ರಾಷ್ಟ್ರೀಯ ಮುಖ್ಯವಾಹಿನಿಗೆ ಬಂದಿಲ್ಲ. ಕಾಂಗ್ರೆಸ್‍ನ ತುಷ್ಟೀಕರಣದ ಫಲ ಇದು. ಮುಸ್ಲಿಮರು ಈಗಲೂ ಪಕ್ಷಪಾತೀಯವಾಗಿ ಮತ ಚಲಾಯಿಸುವುದನ್ನು ಮುಂದುವರಿಸಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಇನ್ನಾದರೂ ಬರಬೇಕು. ಅವರು ರಾಷ್ಟ್ರೀಯ ವಿಚಾರಧಾರೆಗಳ ಬಗ್ಗೆ ಚರ್ಚಿಸಬೇಕು ಎಂಬುದನ್ನು ಪ್ರತಿಪಾದಿಸುತ್ತಲೇ ಇದ್ದೇನೆ. ಕಾಂಗ್ರೆಸ್‌ನ ಅತಿಯಾದ ತುಷ್ಟೀಕರಣ, ಮತಬ್ಯಾಂಕ್ ರಾಜಕೀಯಕ್ಕೆ ಒಳಗಾಗಿ ಅವರು ಮುನ್ನೆಲೆಗೆ ಬರದಂತಾಗಿದ್ದರು. ಈ ಸಲವಾದರೂ ಅವರು ಮುನ್ನೆಲೆಗೆ ಬರುತ್ತಾರೆಂಬ ನನ್ನ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್‍ನಿಂದ ಅಲ್ಪಸಂಖ್ಯಾತರ ಅಭಿವೃದ್ಧಿ ಸಾಧ್ಯವಿಲ್ಲ. ಅವರನ್ನು ಕೇವಲ ಮತಬ್ಯಾಂಕ್ ಆಗಿ ಬಳಸುತ್ತದೆ ಎಂದು ತಿಳಿಸಿದರು.

Join Whatsapp
Exit mobile version