ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಚಿನ್ನಮ್ಮ ಖ್ಯಾತಿಯ ವಿ.ಕೆ ಶಶಿಕಲಾ

Prasthutha|

- Advertisement -

ಚೆನ್ನೈ: ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಮುಖ್ಯಸ್ಥರಾಗಿ ಅಧಿಕಾರ ಮರಳಿ ಪಡೆಯುವ ನಿರೀಕ್ಷೆಯಲ್ಲಿದ್ದ ವಿ.ಕೆ.ಶಶಿಕಲಾ, ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗಲೇ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಶಶಿಕಲಾ, ‘ಜಯಾ (ದಿವಂಗತ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ) ಬದುಕಿದ್ದಾಗಲೂ ನಾನು ಅಧಿಕಾರ ಅಥವಾ ಸ್ಥಾನ ಬಯಸಲಿಲ್ಲ. ಅವಳು ಸತ್ತ ಮೇಲೆಯೂ ಹಾಗೆ ಮಾಡುವುದಿಲ್ಲ. ನಾನು ರಾಜಕೀಯದಿಂದ ದೂರ ಉಳಿದಿದ್ದೇನೆ. ಆದರೆ, ಅವರ ಪಕ್ಷ ಗೆಲ್ಲಲಿ ಎಂದು ಪ್ರಾರ್ಥಿಸುತ್ತೇನೆ, ಅವರ ಪರಂಪರೆ ಮುಂದುವರಿಯಲಿದೆ’ ಎಂದು ಅವರು ಹೇಳಿದ್ದಾರೆ.

Join Whatsapp