ರಾಘವೇಂದ್ರನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ: ಕೆಎಸ್ ಈಶ್ವರಪ್ಪ

Prasthutha|

ಶಿವಮೊಗ್ಗ: ರಾಘವೇಂದ್ರ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ ಎಂದು ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -

ನಗರದ ಮತಗಟ್ಟಯೊಂದರಲ್ಲಿ ಕುಟುಂಬದೊಂದಿಗೆ ಮತ ಚಲಾಯಿಸಿದ ಬಳಿಕ ಮಾತಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಸಹ ತಾನೇ ಸೂಕ್ತ ವ್ಯಕ್ತಿ ಅಂತ ಪರಿಗಣಿಸಿದ್ದು, ಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿ ನರೇಂದ್ರ ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಹೇಳಿದರು.


ಎಲ್ಲರ ಕುತೂಹಲ ಶಿವಮೊಗ್ಗ ಕ್ಷೇತ್ರದ ಮೇಲಿರುವುದು ಸತ್ಯ ಮತ್ತು ತಾನು ಗೆಲ್ಲುತ್ತೇನೆ ಎಂಬ ನಿರೀಕ್ಷೆಯೂ ಅವರಲ್ಲಿದೆ ಎಂದು ಈಶ್ವರಪ್ಪ ಹೇಳಿದರು.

Join Whatsapp