ಅಮಾಯಕ ಸಂಘಪರಿವಾರದ ಕಾರ್ಯಕರ್ತರ ಮನೆಗಳಿಗೆ ಪೊಲೀಸರು ನುಗ್ಗಿದರೆ ಎಚ್ಚರಿಕೆ: ಭರತ್ ಶೆಟ್ಟಿ

Prasthutha|

ಮಂಗಳೂರು: ಹತ್ಯೆ ನಡೆಸಿದ  ಆರೋಪಿಗಳನ್ನು  ಬಂಧಿಸುವ ಬಿಟ್ಟು, ಅಮಾಯಕ ಸಂಘಪರಿವಾರದ ಕಾರ್ಯಕರ್ತರ ಮನೆಗೆ ನುಗ್ಗಿ ಅವರನ್ನು ಕರೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಎಚ್ಚರಿಕೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.

- Advertisement -

ಹತ್ಯೆಗೆ  ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದೆ.   ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ.  ಆದರೆ ಅಮಾಯಕ ಸಂಘಪರಿವಾರದ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಹೀಗೆ ಮಾಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತರಿಗೆ ಭರತ್ ಶೆಟ್ಟಿ  ಎಚ್ಚರಿಕೆ ನೀಡಿದ್ದಾರೆ.

Join Whatsapp