ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿ ಕುಳಿತ ನೀರು ಸರಬರಾಜು ನೌಕರ

Prasthutha|

ಧಾರವಾಡ: ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ನೀರು ಸರಬರಾಜು ನೌಕರನೊಬ್ಬ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಗರದ ಆಲೂರು ವೆಂಕಟರಾವ್ ವೃತ್ತದ ಬಳಿ ನಡೆದಿದೆ.

- Advertisement -

ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ನೀರು ಸರಬರಾಜು ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನೌಕರನಾಗಿರುವ ಮಲ್ಲಿಕಾರ್ಜುನ ಗುಮ್ಮಗೋಳ ಎಂಬಾತ ಟವರ್ ಏರಿ ಕುಳಿತಿದ್ದು, ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

ಕೈಯಲ್ಲಿ ಬೇಡಿಕೆ ಫಲಕ ಸಹಿತ ಟವರ್ ಏರಿದ ಮಲ್ಲಿಕಾರ್ಜುನ ಗುಮ್ಮಗೋಳ, ತುತ್ತ ತುದಿಯಲ್ಲಿ ಕುಳಿತು ಪ್ರದರ್ಶನ ಮಾಡಿದ್ದಾನೆ. ಅಲ್ಲದೆ, ಕಳೆದ ಏಳು ತಿಂಗಳಿನಿಂದ ನಮಗೆ ವೇತನ ನೀಡದೆ ಬಾಕಿ ಉಳಿಸಿದ್ದಾರೆ. ಕೂಡಲೇ ಬಾಕಿ ವೇತನ ನೀಡುವಂತೆ ಆಗ್ರಹಿಸಿದ್ದಾನೆ.

- Advertisement -

ಧಾರವಾಡದಲ್ಲಿ ನಡೆಯುತ್ತಿರುವ ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಈ ಮುಷ್ಕರದಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಭಿತ್ತಿ ಪತ್ರದೊಂದಿಗೆ ಟವರ್ ಏರಿ ಹೈಡ್ರಾಮ ನಡೆಸಿದ್ದಾನೆ.

Join Whatsapp