Home ಟಾಪ್ ಸುದ್ದಿಗಳು ವಯನಾಡ್ ಭೂಕುಸಿತ | 300ರ ಗಡಿ ದಾಟಿದ ಮೃತರ ಸಂಖ್ಯೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ವಯನಾಡ್ ಭೂಕುಸಿತ | 300ರ ಗಡಿ ದಾಟಿದ ಮೃತರ ಸಂಖ್ಯೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ವಯನಾಡ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ 300 ಮಂದಿ ಮೃತಪಟ್ಟಿದ್ದಾರೆ.

ಸದ್ಯ ಬಂದಿರುವ ಮಾಹಿತಿ ಪ್ರಕಾರ 308 ಮಂದಿ ವಯನಾಡ್ ಭೂಕುಸಿತ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ನಮಗೆ ತಿಳಿದುಬಂದಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಭೂಕುಸಿತದಿಂದ ಹಾನಿಗೊಳಗಾದ ಚೂರಲ್ಮಲಾದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


ಕಳೆದ ಮೂರು ದಿನಗಳಿಂದ ಬದುಕುಳಿದವರನ್ನು ರಕ್ಷಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿನ್ನೆ ಘೋಷಿಸಿದ್ದರು. ವಯನಾಡಿನ ಭೂಕುಸಿತ ಪೀಡಿತ ಮುಂಡಕ್ಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ಹೇಳಿದ್ದಾರೆ ಮತ್ತು ರಕ್ಷಣಾ ಪ್ರಯತ್ನಗಳನ್ನು ಸಂಘಟಿಸಲು ನಾಲ್ವರು ಸಚಿವರ ಸಂಪುಟ ಉಪಸಮಿತಿಯನ್ನು ನೇಮಿಸಲಾಗಿದೆ.

ಕೇರಳದ ಕಾನೂನು ಮತ್ತು ಸುವ್ಯವಸ್ಥೆಯ ಹೊಣೆ ಹೊತ್ತಿರುವ ಅಧಾಕಾರಿ ಕುಮಾರ್, ಭೂಕುಸಿತ ಸಂಭವಿಸಿರುವ ಪ್ರದೇಶಗಳನ್ನು 6 ವಲಯಗಳಾಗಿ ವಿಂಗಡಿಸಿ ಶೋಧ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ, ಶ್ವಾನದಳಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version