ಒಂದು ಧರ್ಮವನ್ನು ಉದ್ದೇಶಿಸಿಯೇ ನಾವು ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು: ಈಶ್ವರಪ್ಪ

Prasthutha|

ಶಿವಮೊಗ್ಗ: ಲವ್ ಜಿಹಾದ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಬೇರೆ ಬೇರೆ ಕಡೆ ನಮ್ಮ ಸಹೋದರಿಯರು ಬಲಿಯಾಗಿದ್ದಾರೆ ಎನ್ನುವುದು ಡಿ ಕೆ ಶಿವಕುಮಾರ್ ಅವರಿಗೆ ಗೊತ್ತಿಲ್ಲವೇ? ಅವರಿಗೆ ಗೊತ್ತಿಲ್ಲ ಅಂದರೆ ನಾನೇ ಕರೆದುಕೊಂಡು ಹೋಗಿ ತೋರಿಸುತ್ತೇನೆ.

- Advertisement -

ಎಲ್ಲೆಲ್ಲಿ ಮತಾಂತರ ಮಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮೋಸ ಮಾಡಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿರೋಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಆಗುತ್ತಿರುವ ಮತಾಂತರದ ಬಗ್ಗೆ ಡಿಕೆಶಿ ಅವರಿಗೆ ವೀರಶೈವ ಸಮಾಜದವರೇ ನೇರವಾಗಿ ಹೇಳಿದ್ದಾರೆ. ಮುಗ್ಧ ವೀರಶೈವ ಬಂಧುಗಳನ್ನು ಆಸೆ, ಆಮಿಷ ತೋರಿಸಿ ಮತಾಂತರ ಮಾಡಿದ್ದಾರೆ. ಅವರನ್ನು ಮತ್ತೆ ವಾಪಸ್ ನಮ್ಮ ಧರ್ಮಕ್ಕೆ ತರುತ್ತೇವೆ ಎಂಬುದನ್ನು ವೀರಶೈವ ಸಮಾಜದ ಅನೇಕ ಪೂಜ್ಯರು ಹೇಳಿದ್ದಾರೆ.

ಡಿಕೆಶಿ ‌ ಕೇವಲ ಓಟಿನ ಲೆಕ್ಕ ನೋಡುತ್ತಿದ್ದಾರೆ. ಒಬ್ಬೊಬ್ಬ ವ್ಯಕ್ತಿ ಮತಾಂತರವಾದ ಸಂದರ್ಭದಲ್ಲಿ ಅವರು ಅನುಭವಿಸುವ, ಜೀವನದ ತೊಂದರೆಯನ್ನು ಡಿಕೆಶಿ ಗಮನಿಸಿಲ್ಲ. ಡಿಕೆಶಿ ಅವರೇ ಮತಾಂತರ ಆಗಿರುವ ಹೆಣ್ಣು ಮಕ್ಕಳನ್ನು, ನಮ್ಮ‌ ದೇಶದಿಂದ ವಿದೇಶಕ್ಕೆ ತೆಗೆದುಕೊಂಡು ಮಾರಾಟ ಮಾಡಿರುವ ಹೆಣ್ಣುಮಕ್ಕಳ ಕಷ್ಟ ಕೇಳಿ ತಿಳಿದುಕೊಳ್ಳಿ. ನೀವು ಈ ವಿಷಯ ತಿಳಿದುಕೊಂಡಿದ್ದರೇ, ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿದರು.

Join Whatsapp