ಒಡಿಶಾ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿದ್ದೇವೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಒಡಿಶಾ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿ ಇದ್ದೇವೆ. ಕರ್ನಾಟಕದ ಬಗ್ಗೆ ಮಾಹಿತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿದ್ದೇನೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯಾವತ್ತೂ ಆಗಿರಲಿಲ್ಲ. ದೊಡ್ಡ ಪ್ರಮಾಣದ ಅಪಘಾತ. ಕರ್ನಾಟಕದವರ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಸಂತೋಷ್ ಲಾಡ್ 3 ಗಂಟೆ ಫ್ಲೈಟ್ ಗೆ ಹೋಗಿದ್ದಾರೆ ಎಂದರು.


ಕೇಂದ್ರ ರೈಲ್ವೆ ಇಲಾಖೆ ಮತ್ತು ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.



Join Whatsapp