Home ಟಾಪ್ ಸುದ್ದಿಗಳು ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲಿಲ್ಲಿ ಮಾಡಬೇಕೆಂದು ನಿರ್ಧಾರ ಮಾಡಲಾಗುತ್ತಿದೆ. ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ವಿವರಗಳನ್ನು 3-4 ದಿನಗಳಲ್ಲಿ  ಪಕ್ಷ ಪ್ರಕಟಿಸಲಿದೆ ಎಂದು ತಿಳಿಸಿದರು.

Join Whatsapp
Exit mobile version