ಪ್ರಜ್ವಲ್‌ ರೇವಣ್ಣಗೂ ನಮಗೂ ಸಂಬಂಧವಿಲ್ಲ: ಜಿ.ಟಿ. ದೇವೇಗೌಡ

Prasthutha|

ಮೈಸೂರು: ಪ್ರಜ್ವಲ್‌ ರೇವಣ್ಣಗೂ ನಮಗೂ ಸಂಬಂಧ ಇಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರನ್ನು ಈಗಾಗಲೇ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈಗ ಪ್ರಜ್ವಲ್‌ಗೂ ನಮಗೂ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.

ಮಾಜಿ ಶಾಸಕ ಸಾ.ರಾ. ಮಹೇಶ್‌ ಕೂಡ ಈ ಸಂದರ್ಭದಲ್ಲಿ ಮಾತನಾಡಿ, ಹೆಚ್‌.ಡಿ.ದೇವೇಗೌಡರು ಈಗಾಗಲೇ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಅದರಂತೆ ಪ್ರಜ್ವಲ್‌ ಈಗಾಗಲೇ ಬರಬೇಕಿತ್ತು. ಇದೀಗ ಬರುವುದಾಗಿ ಹೇಳಿದ್ದಾರೆ. ಈ ನೆಲದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅವರು ಬಂದ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ. ನಾನು ಈಗಾಗಲೇ ತಿಳಿಸಿರುವಂತೆ, ಎಚ್‌.ಡಿ.ರೇವಣ್ಣ ಬಂಧನ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ. ಆದರೆ ಪ್ರಜ್ವಲ್‌ ವಿಚಾರದಲ್ಲಿ ಮಾತನಾಡಲು ಈಗಲೂ ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದಿದ್ದಾರೆ.



Join Whatsapp