Home ಟಾಪ್ ಸುದ್ದಿಗಳು ನಾವು ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿ ಬಂದಿದ್ದಾರೆ: ದಿನೇಶ್ ಗುಂಡೂರಾವ್

ನಾವು ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿ ಬಂದಿದ್ದಾರೆ: ದಿನೇಶ್ ಗುಂಡೂರಾವ್

ಕೊಪ್ಪಳ: ನಾವು ಯಾವುದೇ ಆಪರೇಷನ್ ಮಾಡಿಲ್ಲ, ಅವರೇ ಒಪ್ಪಿಕೊಂಡು ಬಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲೆಯ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದವರು, ಮರಳಿ ಪಕ್ಷ ಸೇರಿದ್ದಾರೆ. ಪಕ್ಷದ ಅಭ್ಯರ್ಥಿಯಾದರೆ ಸಂತೋಷ. ಅದು ಉಪಮುಖ್ಯಮಂತ್ರಿಗಳ ಜವಾಬ್ದಾರಿ ಕ್ಷೇತ್ರ ಎಂದಿದ್ದಾರೆ.

ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅವರೇ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

Join Whatsapp
Exit mobile version