ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

Prasthutha|

ಕಲಬುರಗಿ: ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..

- Advertisement -

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ `ಗೃಹಜ್ಯೋತಿ’ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಇವತ್ತಿನ ದಿನ ಐತಿಹಾಸಿಕ ದಿನ. ಜ್ಯೋತಿ ಬೆಳಗಿಸುವ ಮೂಲಕ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಿದ್ದೇವೆ. ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನ ಘೋಷಿಸಿ ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೆವು. ನಾನು, ಡಿಕೆಶಿ ಗ್ಯಾರಂಟಿ ಕಾರ್ಡ್ಗೆ ಸಹಿ ಮಾಡಿ ಹಂಚಿದ್ದೆವು. ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.


ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 160 ಭರವಸೆಗಳಲ್ಲಿ 145 ಭರವಸೆಗಳನ್ನ ಈಡೇರಿಸಿದ್ದೇವೆ. ಈ ಬಾರಿಯೂ ಮುಂದಿನ 5 ವರ್ಷದಲ್ಲಿ ನಮ್ಮ ಪ್ರಣಾಳಿಕೆಯ ಎಲ್ಲಾ ಅಂಶ ಜಾರಿಗೆ ತರುತ್ತೆವೆ ಎಂದು ಭರವಸೆ ನೀಡಿದರು.

- Advertisement -


ಈ ಐದು ಗ್ಯಾರಂಟಿ ಕೊಟ್ಟರೆ, ದೇಶ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾವು ಐದು ಗ್ಯಾರಂಟಿ ಕೊಟ್ಟು ಆರ್ಥಿಕ ಶಿಸ್ತನ್ನೂ ಕೊಡುತ್ತೆವೆ. ಪ್ರಧಾನಿಮೋದಿ ಅವರು ರಾಜ್ಯದ ಎಲ್ಲಾ ಯೋಜನೆಗಳನ್ನ ಸಹ ನಿಲ್ಲಿಸುತ್ತಾರೆ. ಈ ರಾಜ್ಯದಲ್ಲಿ ದುರಾಡಳಿತ ಮಾಡಿ ಲೂಟಿ ಮಾಡಿ ಈ ರಾಜ್ಯದ ಜನರಿಗೆ ಅನ್ಯಾಯ ಮಾಡಿದವರು ಬಿಜೆಪಿ. ನಾವು ಅಧಿಕಾರದಲ್ಲಿದ್ದಾಗ 16 ಲಕ್ಷ ಮನೆ ಕಟ್ಟಿಸಿದ್ದಿವಿ. ಆದ್ರೆ ಬಿಜೆಪಿ ಅವರು ಕೇವಲ 8 ಲಕ್ಷ ಮನೆ ಕಟ್ಟಿಸಿದ್ದಾರೆ ಎಂದು ಕಿಡಿ ಕಾರಿದರು



Join Whatsapp