ಭಾರತದಲ್ಲಿ ಹೇಗೆ ಬದುಕಬೇಕು ಎನ್ನುವುದನ್ನು ನಾವು ಕಲಿಸುತ್ತೇವೆ : ಮೋಹನ್ ಭಾಗವತ್

Prasthutha|

ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಭಾರತದಲ್ಲಿ ಹೇಗೆ ಬದುಕಬೇಕು ಎನ್ನುವುದನ್ನು ನಾವು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ತಿಳಿಸಿದ್ದಾರೆ.

- Advertisement -

ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.

“1930ರಿಂದ ದೇಶದಲ್ಲಿ ಮುಸ್ಲಿಂ ಜನ ಸಂಖ್ಯೆಯನ್ನು ಹೆಚ್ಚಿಸುವ ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. ಅಸ್ಸಾಂ ಸೇರಿದಂತೆ ಪಂಜಾಬ್‌‌, ಸಿಂಧ್‌ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದರು.

Join Whatsapp