Home ಟಾಪ್ ಸುದ್ದಿಗಳು “ಚೀನಾದಂತೆ ನಾವು ಕರ್ನಾಟಕವನ್ನು ಪ್ರವೇಶಿಸುತ್ತೇವೆ”: ಗಡಿ ವಿವಾದದ ಬಗ್ಗೆ ಸಂಜಯ್ ರಾವತ್ ಹೇಳಿಕೆ

“ಚೀನಾದಂತೆ ನಾವು ಕರ್ನಾಟಕವನ್ನು ಪ್ರವೇಶಿಸುತ್ತೇವೆ”: ಗಡಿ ವಿವಾದದ ಬಗ್ಗೆ ಸಂಜಯ್ ರಾವತ್ ಹೇಳಿಕೆ

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ನಡುವೆಯೇ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವತ್ ‘ಚೀನಾ ನಮ್ಮ ದೇಶವನ್ನು ಪ್ರವೇಶಿಸಿದಂತೆ ನಾವು ಕೂಡ ಕರ್ನಾಟಕವನ್ನು ಪ್ರವೇಶಿಸುತ್ತೇವೆ’ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಇದಕ್ಕೆ ನಮಗೆ ಯಾರ ಅನುಮತಿಯ ಅಗತ್ಯವೂ ಇಲ್ಲ ಎಂದು ಪಕ್ಷದ ಹಿರಿಯ ನಾಯಕ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ ನಮ್ಮ ದೇಶವನ್ನು ಪ್ರವೇಶಿಸಿದಂತೆ, ನಾವು ಕರ್ನಾಟಕ ಪ್ರವೇಶಿಸುತ್ತೇವೆ. ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ. ಚರ್ಚೆಯ ಮೂಲಕ ನಾವು ಇದನ್ನು ಪರಿಹರಿಸಲು ಪ್ರಯತ್ನಿಸುತಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬೆಂಕಿಯನ್ನು ಹೊತ್ತಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಆದ್ದರಿಂದ ಈ ಬಗ್ಗೆ ಯಾವುದೇ ನಿಲುವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಂಜಯ್ ರಾವತ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version