ಜಾರ್ಖಂಡ್’ನಿಂದ ಬಿಜೆಪಿಯನ್ನು ತೊಡೆದುಹಾಕುತ್ತೇವೆ: ಮಾಜಿ ಸಿಎಂ ಹೇಮಂತ್ ಸೊರೇನ್

Prasthutha|

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೇನ್ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದಿಂದಲೇ ತೊಡೆದುಹಾಕುವುದಾಗಿ ಹೇಳಿದ್ದಾರೆ.

- Advertisement -


ರಾಂಚಿಯಲ್ಲಿ ಜೆಎಂಎಂ ಕಾರ್ಯಕರ್ತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸೊರೇನ್, ಭಾರತದ ಸಾಮಾಜಿಕ ರಚನೆಯನ್ನು ನಾಶಪಡಿಸುವಲ್ಲಿ ಬಿಜೆಪಿ ಪರಿಣತಿಯನ್ನು ಹೊಂದಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಪಾಠ ಕಲಿಸಿದ್ದಾರೆ. ಅದು ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದೆ” ಎಂದು ಹೇಳಿದ್ದಾರೆ.


ನಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದವರಿಗೆ ತಕ್ಕ ಉತ್ತರ ನೀಡುತ್ತೇವೆ. ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ. ಜಾರ್ಖಂಡ್ನಿಂದ ಬಿಜೆಪಿಯನ್ನು ನಿರ್ನಾಮ ಮಾಡಲಾಗುವುದು. ರಾಜ್ಯದಲ್ಲಿ (ವಿಧಾನಸಭಾ) ಚುನಾವಣೆಗಳು ಮೊದಲೇ ನಡೆಯಬಹುದು ಎಂಬ ಮಾಹಿತಿ ನನಗೆ ಬಂದಿದೆ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ ಎಂದು ಸೊರೇನ್ ಹೇಳಿದ್ದಾರೆ.

Join Whatsapp