Home ಟಾಪ್ ಸುದ್ದಿಗಳು ಗೋ ಹತ್ಯೆ ಮಾಡುವವರನ್ನುಕೊಲ್ಲುತ್ತೇವೆ: ಸಚಿವ ಈಶ್ವರಪ್ಪ

ಗೋ ಹತ್ಯೆ ಮಾಡುವವರನ್ನುಕೊಲ್ಲುತ್ತೇವೆ: ಸಚಿವ ಈಶ್ವರಪ್ಪ

►ಬಿಜೆಪಿ ಸರ್ಕಾರ ಬಂದರೂ ಗೋಹತ್ಯೆ ನಿಂತಿಲ್ಲ

ಉಡುಪಿ: ಗೋಹತ್ಯೆ ಮಾಡುವವರನ್ನು ನಾವು ಬಲಿ ಪಡೆಯುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.


ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಕ್ಷೇಮ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಸಚಿವನಾಗಿ ನನಗೆ ಈಗಲೂ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳದ ಬಗ್ಗೆ ಅಸಮಾಧಾನ ಇದೆ.

ಹೆಂಡತಿ-ಮಕ್ಕಳಿಗೆ ಏನಾದರೂ ಮಾಡಿದರೆ ಎಂಬ ಭಯ ಅವರನ್ನು ಕಾಡುತ್ತಿದೆ. ಬಿಜೆಪಿ ಸರ್ಕಾರ ಬಂದರೂ ಗೋಹತ್ಯೆ ನಿಂತಿಲ್ಲ. ಇದನ್ನೆಲ್ಲ ನೋಡುವಾಗ ನನಗೆ ಹೊಟ್ಟೆ ಉರಿಯುತ್ತಿದೆ. ಪೂರ್ಣ ಗೋಹತ್ಯೆ ನಿಲ್ಲಿಸಲು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಗೋಹತ್ಯೆ ಮಾಡುವವರಿಗೆ ಬಲೆ ಹಾಕುತ್ತೇವೆ ಮತ್ತು ಬಲಿ ತೆಗೆದುಕೊಳ್ಳುತ್ತೇವೆ’ಎಂದು ಹೇಳಿದರು.

Join Whatsapp
Exit mobile version