ಸಿಎಂ ಇಬ್ರಾಹಿಂ ಜೆಡಿಎಸ್ ಗೆ ಬರುವುದಾದರೆ ಸ್ವಾಗತ: ಹೆಚ್ ಡಿ ಕುಮಾರಸ್ವಾಮಿ

Prasthutha|

ಬೆಂಗಳೂರು: ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಅವರು ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

- Advertisement -

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ರಾಹಿಂ ಅವರು ದೇವೇಗೌಡರ ಜತೆ ಹಲವು ವರ್ಷಗಳ ಕಾಲ ಇದ್ದವರು. ಇತ್ತೀಚೆಗೆ ಇಬ್ರಾಹಿಂ ಜತೆ ಹಲವು ಬಾರಿ ಚರ್ಚಿಸಿದ್ದೇನೆ. ಪರಿಷತ್ ವಿಪಕ್ಷ ಸ್ಥಾನ ಕೊಟ್ಟರೆ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದೆ. ಸಿ.ಎಂ.ಇಬ್ರಾಹಿಂಗೆ ಜೆಡಿಎಸ್ ಮೇಲೆ ವ್ಯಾಮೋಹವಿದೆ. ಅವರು ಪಕ್ಷಕ್ಕೆ ಬರುವುದಾದರೆ ಮುಕ್ತ ಆಹ್ವಾನವಿದೆ. ಇಂದು ಬೆಳಗ್ಗೆಯೂ ಸಿ.ಎಂ.ಇಬ್ರಾಹಿಂ ಜತೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.



Join Whatsapp