ಪಶ್ಚಿಮ ಬಂಗಾಳ | ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ: 7 ಮಂದಿ ಸಾವು, ಹಲವರಿಗೆ ಗಾಯ

Prasthutha|

ಕೊಲ್ಕತ್ತಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಬೀರ್ ಭೂಮ್‌ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಕಲ್ಲಿದ್ದಲು ಪುಡಿ ಮಾಡುವ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.


ಘಟನೆಯ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಆಸ್ಪತ್ರೆಗೆ ರವಾನಿಸಿದರು.



Join Whatsapp