ಚಾಮರಾಜನಗರ ನಗರಸಭೆ; ಕಾಂಗ್ರೆಸ್ ತನ್ನ ನಾಯಕರ ಮೇಲೆ ಏನು ಕ್ರಮ ಕೈಗೊಳ್ಳುತ್ತದೆ?: ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಚಾಮರಾಜನಗರ ನಗರಸಭಾ ಅಧಿಕಾರ ಬಿಜೆಪಿ ಪಾಲಾಗಿದೆ. ಈ ಚುನಾವಣೆಯನ್ನು ಸರಿಯಾಗಿ ನಿರ್ವಹಿಸದ ನಾಯಕರ ಬಗ್ಗೆ ಕಾಂಗ್ರೆಸ್ ಏನು ಕ್ರಮ ಕೈಗೊಳ್ಳುತ್ತದೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಶ್ನಿಸಿದ್ದಾರೆ.

- Advertisement -


ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಚಾಮರಾಜನಗರದಲ್ಲಿ ಕಾಂಗ್ರೆಸ್ ನ ಉಸ್ತುವಾರಿ ಮಂತ್ರಿ ವೆಂಕಟೇಶ್, ಲೋಕಸಭಾ ಸದಸ್ಯ ಸುನಿಲ್ ಬೋಸ್, ಶಾಸಕ ಪುಟ್ಟರಂಗಶೆಟ್ಟಿ ಇದ್ದು, ಬಹುಮತ ಇದ್ದರೂ ಕೂಡ, ನಗರಸಭೆಯ ಅಧಿಕಾರ ಹಿಡಿಯುವಲ್ಲಿ, ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ ನ ಮೂವರು ನಗರಸಭಾ ಸದಸ್ಯರು ಗೈರು ಹಾಜರಾಗಿ, ಒಬ್ಬ ಕಾಂಗ್ರೆಸ್ ಸದಸ್ಯ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದರಿಂದ, ನಗರಸಭಾ ಅಧಿಕಾರ ಬಿಜೆಪಿ ಪಾಲಾಗಿದೆ. ಈ ಚುನಾವಣೆಯನ್ನು ಸರಿಯಾಗಿ ನಿರ್ವಹಿಸದ, ಕಾಂಗ್ರೆಸ್ ನಾಯಕರ ಬಗ್ಗೆ ಕಾಂಗ್ರೆಸ್ ಏನು ಕ್ರಮ ಕೈಗೊಳ್ಳುತ್ತದೆ, ಕಾದು ನೋಡಬೇಕಿದೆ ಎಂದು ಬರೆದುಕೊಂಡಿದ್ದಾರೆ.



Join Whatsapp