Home ಟಾಪ್ ಸುದ್ದಿಗಳು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶ್ರೀರಾಮುಲು ಹೇಳಿದ್ದೇನು..?

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶ್ರೀರಾಮುಲು ಹೇಳಿದ್ದೇನು..?

0

ಬಳ್ಳಾರಿ: ಕಾಂಗ್ರೆಸ್ ನಿಂದ ಆಫರ್ ಬಂದಿರಲಿ, ಬರದಿರಲಿ. ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನನಗೆ ಗೌರವ ಕೊಟ್ಟಿರುವ ಕಾಂಗ್ರೆಸ್ ನವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.


ಬಿಜೆಪಿಯಲ್ಲಿ ರೆಬೆಲ್ ಆಗಿರುವ ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ನಾಯಕರು ಆಹ್ವಾನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.


ನಾವು ಒಳ್ಳೆಯವರಿದ್ದರೇನೆ ಕರೆಯುವುದು. ರಾಮುಲು ಒಳ್ಳೆಯವರಾಗಿ ಕಂಡಿದ್ದಾರೆ. ನನ್ನ ಮೇಲೆ ಗೌರವದಿಂದ ಇಟ್ಟಿದ್ದಾರೆ. ಅದಕ್ಕೆ ಆ ಗೌರವದಿಂದ ಕರೆಯುತ್ತಿದ್ದಾರೆ. ಕಾಂಗ್ರೆಸ್ ನವರು ರಾಜಕೀಯ ಹೊರತುಪಡಿಸಿ, ಅಭಿಮಾನದಿಂದ ಮಾತನಾಡಿದ್ದಾರೆ ಎಂದರು.


ಇನ್ನೂ ಕಾಂಗ್ರೆಸ್ ಸೇರುತ್ತೀರಾ ಎನ್ನುವ ವಿಚಾರಕ್ಕೂ ಪ್ರತಿಕ್ರಿಯಿಸಿದ ರಾಮುಲು, ಮಾಧ್ಯಮದ ಮೂಲಕ ಕಾಂಗ್ರೆಸ್ ನವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಏನೇ ಮಾಡಬೇಕಿದ್ದರೂ ನಿಮ್ಮನ್ನೆಲ್ಲಾ ಕೂರಿಸಿಕೊಳ್ಳುತ್ತೇನೆ. ಎಲ್ಲವನ್ನೂ ಓಪನ್ ಆಗಿ ಹೇಳುತ್ತೇನೆ. ಹಾಗಿದ್ದಲ್ಲಿ ನಿಮಗೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version