RSS ಬ್ಯಾನ್ ಮಾಡಿ ಅನ್ನುವ ಕಾಂಗ್ರೆಸ್, ಅಧಿಕಾರದಲ್ಲಿದ್ದಾಗ ಏನು ಮಾಡಿತು: ಸಿಎಂ ಇಬ್ರಾಹಿಂ

Prasthutha|

ವಿಜಯಪುರ: ಕೇಂದ್ರ ಬಿಜೆಪಿ ಸರಕಾರ ದೇಶದಲ್ಲಿ ಪಿಎಫ್‌ಐ ಬ್ಯಾನ್‌ ಮಾಡಿದಾಗ ಸ್ವಾಗತಿಸಿದವರು, ರಾಮಸೇನೆಯವರಿಗೆ ಚಿಕ್ಕಪ್ಪನ ಮಕ್ಕಳಾಗ್ಬೇಕಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‍ಎಸ್ ಅನ್ನು ಬ್ಯಾನ್ ಮಾಡಿ ಅನ್ನುವ ಕಾಂಗ್ರೆಸ್ , ಅಧಿಕಾರದಲ್ಲಿದ್ದಾಗ ಏನು ಮಾಡಿತು? ಪಿಎಫ್‍ಐ ಬ್ಯಾನ್ ಎಂದಾಗ ಸ್ವಾಗತ ಅನ್ನೋರಿಗೆ ರಾಮಸೇನೆ ಅವರು ಚಿಕ್ಕಪ್ಪನ ಮಕ್ಕಳಾ?, ರಾಜ್ಯದಲ್ಲಿ ಗೂಂಡಾಗಳು ಸತ್ತರೆ ಲಕ್ಷ ಲಕ್ಷ ರೂ. ಪರಿಹಾರ ಕೊಡುವವರು ಇವರು, ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ಧರ್ಮ ನೋಡದೆ ಹಿಂದೂ – ಮುಸ್ಲಿಂ ಎಲ್ಲರಿಗೂ ಸಮಾನ ಪರಿಹಾರ ಹಣ ನೀಡಿದ್ದೆವು ಎಂದರು.

ಇನ್ನು ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎಸ್‍ಸಿ- ಎಸ್‍ಟಿ ಮೀಸಲಾತಿ ಹೆಚ್ಚಳ ಕೇವಲ ಗಿಮಿಕ್ ಆಗಿದೆ. ಆರ್‌ಎಸ್‍ಎಸ್‍ನವರಾದ ಬಿ.ಎಸ್. ಯಡಿಯೂರಪ್ಪ ಇದ್ದಾಗಲೇ ಆಗಲಿಲ್ಲ. ಅಡಬೆರಕಿ ಆರ್‌ಎಸ್‍ಎಸ್ ಆದ ಬೊಮ್ಮಾಯಿ ಇವರಿಂದ ಆಗುತ್ತದಾ? ಎಂದು ಕುಟುಕಿದರು.

Join Whatsapp