ರಾಮನಿಗೂ ಅಶ್ವಥ್ ನಾರಾಯಣಗೂ ಏನು ಸಂಬಂಧ: ಹೆಚ್.ಡಿ. ದೇವೇಗೌಡ ಕಿಡಿ

Prasthutha|

ರಾಯಚೂರು: ರಾಮನಿಗೂ ಸಚಿವ ಅಶ್ವಥ್ ನಾರಾಯಣಗೂ ಏನು ಸಂಬಂಧ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

- Advertisement -


ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡ್ತೀವಿ ಅನ್ನೋ ವಿಚಾರದ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಅಶ್ವಥ್ ನಾರಾಯಣ ಬಗ್ಗೆ ಅವರ ವಿಚಾರಗಳ ಬಗ್ಗೆ ವಿಧಾನಸೌಧದಲ್ಲಿ ಸಾಕಷ್ಟು ಚರ್ಚೆ ಆಗಿವೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.


ನಿಖಿಲ್ ಕುಮಾರಸ್ವಾಮಿ ಎಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಬೇಕು ಅನ್ನೋ ವಿಚಾರವಾಗಿ ಮಾತನಾಡಿ, ಜನ ಈ ಬಗ್ಗೆ ತಿರ್ಮಾನ ಮಾಡುತ್ತಾರೆ ಎಂದರು.

Join Whatsapp