ರಾಹುಲ್ ಗಾಂಧಿ ವಿರುದ್ಧ ಕೇಸ್ ಹಾಕಿದ್ದು ಯಾವ ರಾಜಕಾರಣ?: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ದ್ವೇಷ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್ ಗಾಂಧಿ ಅವರಿಗೂ ಏನು ಸಂಬಂಧ? ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಆ ಜಾಹೀರಾತು ಕೊಟ್ಟಿದ್ದು ರಾಹುಲ್ ಗಾಂಧಿ ಅವರೇ? ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾ ಅಥವಾ ಕೆಪಿಸಿಸಿ ಅಧ್ಯಕ್ಷರಾ ಎಂದು ಉಪ ಮುಖ್ಯಮಂತ್ರಿ ಬಿಜೆಪಿಯ ದ್ವೇಷ ರಾಜಕೀಯ ಹೇಳಿಕೆಗೆ ಕಿಡಿಗಾರಿದ್ದಾರೆ.

- Advertisement -

ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳು, ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ. ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂದು ಬಿಜೆಪಿಯ ಟೀಕೆ ಬಗ್ಗೆ ಕೇಳಿದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ.

- Advertisement -

ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಹಾಗೂ ಮಾಧ್ಯಮಗಳ ವರದಿ ಆಧರಿಸಿ ಆ ಜಾಹೀರಾತನ್ನು ಕೆಪಿಸಿಸಿ ವತಿಯಿಂದ ನಾನು ಕೊಟಿದ್ದೆ. ನಮ್ಮ ಮೇಲೆ ಕೇಸ್ ಹಾಕಿದ್ದಾರೆ. ಈ ಕೇಸ್ ಹಾಕಿಸುವಾಗ ವಿಜಯೇಂದ್ರಗೆ ಸಾಮಾನ್ಯ ಪ್ರಜ್ಞೆ ಇರಲಿಲ್ಲವೇ? ನಾವು ಅವರಂತೆ ನೀಚ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಸದಾ ದ್ವೇಷ ಮಾಡುತ್ತಾರೆ ಹೊರತು ಕಾಂಗ್ರೆಸ್ ಪಕ್ಷವಲ್ಲ ಎಂದು ತಿಳಿಸಿದರು.

ದರ್ಶನ್ ಅವರ ಪ್ರಕರಣದಲ್ಲಿ ಪ್ರಭಾವಿಗಳ ಒತ್ತಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಈ ಪ್ರಕರಣದಲ್ಲಿ ಯಾವುದೇ ಒತ್ತಡವಿಲ್ಲ. ಈ ಬಗ್ಗೆ ನಾನು ವಿಚಾರಿಸಿದ್ದೇನೆ. ಪ್ರಕರಣದಲ್ಲಿ 13 ಆರೋಪಿಗಳಿದ್ದು, ಮಾಧ್ಯಮಗಳು ಬೆಳಗ್ಗೆಯಿಂದ ಸಂಜೆವರೆಗೂ ಕ್ಯಾಮೆರಾ ಹಿಡಿದಿರುತ್ತೀರಿ, ಪೊಲೀಸರಿಗೆ ಸ್ವತಂತ್ರವಾಗಿ ವಿಚಾರಣೆ ನಡೆಸಲು ಆಗುತ್ತಿಲ್ಲ ಎಂದು ಅವರು ಶಾಮಿಯಾನ ಹಾಕಿಕೊಂಡಿದ್ದಾರೆ. ಈ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಗೃಹ ಸಚಿವರಿಂದ ಹಿಡಿದು ಯಾರೊಬ್ಬರೂ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.

Join Whatsapp