ಬಿಸಿಲಿನ ತೀವ್ರತೆ: ವಿಟ್ಲದಲ್ಲಿ ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Prasthutha|

ವಿಟ್ಲ: ಬಿಸಿಲಿನ ತೀವ್ರತೆಯಿಂದಾಗಿ ಚಲಿಸುತ್ತಿದ್ದ ಬಸ್ಸಿನ ಗಾಜು ಇದ್ದಕ್ಕಿಂದ್ದಂತೆ ಒಡೆದ ಘಟನೆ ವಿಟ್ಲದ ಉರಿಮಜಲು ಎಂಬಲ್ಲಿ ನಡೆದಿದೆ. ಕೇರಳ ರಾಜ್ಯ ಸಾರಿಗೆ ಬಸ್ಸಿನ ಗಾಜು ಒಡೆದಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡಿದ್ದಾರೆ.

- Advertisement -

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಾಲಕನೋರ್ವ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬಸ್ ಸ್ಥಳದಲ್ಲಿಯೇ ನಿಂತಿದೆ. ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ಕಳುಹಿಸಲಾಗಿದೆ.

Join Whatsapp