ಮುಖ್ಯಮಂತ್ರಿಗಳಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಯಾರು: ಡಿ.ಕೆ.ಸುರೇಶ್ ಪ್ರಶ್ನೆ

Prasthutha|

ಬೆಂಗಳೂರು: ಮುಖ್ಯಮಂತ್ರಿಗಳಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು ಯಾರು? ಸರ್ಕಾರಿ ಕಾರ್ಯಕ್ರಮವನ್ನು ದುರುಪಯೋಗ ಪಡಿಸಿಕೊಂಡಿದ್ದು ಯಾರು? ಸಂವಿಧಾನಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ದಲಿತಪರ ಸಂಘಟನೆಗಳು ಮತ್ತು  ಚಿಂತಕರನ್ನು ದೂರವಿಟ್ಟು ಕಾರ್ಯಕ್ರಮ ಮಾಡಿದ್ದು ಸರಿಯಾ? ಇದು ರಾಮನಗರ ಜಿಲ್ಲೆಯ ಜನರಿಗಾದ ಅಗೌರವ ಅಲ್ಲವೇ? ಈ ದುರ್ವರ್ತನೆಯನ್ನು ರಾಮನಗರದ ಜಿಲ್ಲೆಯವರಾದ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.

- Advertisement -

ನಿನ್ನೆ ಸರ್ಕಾರಿ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್ ಹಾಗೂ ಸಚಿವ ಡಾ.ಅಶ್ವತ್ಥನಾರಾಯಣ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದನ್ನು ಪ್ರಸ್ತಾಪಿಸಿ ಡಿ.ಕೆ.ಸುರೇಶ್ ಇಂದು ಸರಣಿ ಟ್ವೀಟ್ ಮಾಡಿದ್ದಾರೆ.

Join Whatsapp