ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ?: ಜೆಡಿಎಸ್ ಟೀಕೆ

Prasthutha|

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

- Advertisement -

ಎಕ್ಸ್‌ ನಲ್ಲಿ ಸಿಎಂ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಇಡಿ ಕುಣಿಕೆ ಬಿಗಿಗೊಳ್ಳುತ್ತಿರುವುದರಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ

ನಾನು ತಪ್ಪೇ ಮಾಡಿಲ್ಲ, ವೈಟ್ನರ್ ಹಾಕಿದ್ದು ನಾನಲ್ಲ, ನಾನು ಕ್ಲೀನ್ ಅಂಡ್ ಕ್ಲಿಯರ್. ಅದು ನಾನಲ್ಲ. ನಾನಲ್ಲ, ಆ ಸೈಟುಗಳಿಗೂ ನನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಸೈಟ್ ಸಿದ್ದಪ್ಪನವರೇ. ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? ರಾಜೀನಾಮೆ ಕೊಡಿ ಎಂದು ನೀವೇ ಹೇಳಿದಿರೋ ಅಥವಾ ಮರಿಯೇ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿತೋ? ನೇಷನ್ ವಾಂಟ್ಸ್ ಟು ನೋ ಎಂದು ಪ್ರಶ್ನೆ ಮಾಡಿದೆ. ಇಡಿ ಕುಣಿಕೆ ಬಿಗಿದುಕೊಳ್ಳುತ್ತಿದೆ ಇದರ ಪರಿಣಾಮಗಳು ಇಲ್ಲಿವೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ.

- Advertisement -

ಪರಿಣಾಮ 1: 14 ನಿವೇಶನಗಳು ಮೂಡಾಕ್ಕೆ ವಾಪಸ್!

ಪರಿಣಾಮ 2: ಮೂಡಾ ಮರಿ ತಲೆದಂಡ

ಪರಿಣಾಮ 3: ಇನ್ನಷ್ಟು ತಲೆದಂಡಗಳು ಕಾದಿವೆ



Join Whatsapp