ನನ್ನನ್ನು ಯಾಕೆ ಸೋಲಿಸಿದ್ದೀರಿ:‌ ಕ್ಷೇತ್ರದ ಜನರಿಗೆ ರಮೇಶ್ ಕುಮಾರ್ ಪ್ರಶ್ನೆ

Prasthutha|

ಶ್ರೀನಿವಾಸಪುರ: ಯಾರನ್ನು ನಂಬುವುದು, ಯಾರನ್ನು ಬಿಡುವುದು ಎಂದು ತಿಳಿಯುತ್ತಿಲ್ಲ. ಅನೇಕರು ವಿವಿಧ ಪ್ರಯೋಜನ ಪಡೆದುಕೊಂಡು ನನ್ನನ್ನು ಸೋಲಿಸಿದ್ದೀರಿ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್‌ ಕುಮಾರ್ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ.

- Advertisement -

ತಾಲ್ಲೂಕಿನ ರಾಯಲ್ಪಾಡು ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಹೀಗೆ ಮಾತನಾಡಿದರು.

11 ತಿಂಗಳಿನಿಂದ ನಾನು ತೋಟದಲ್ಲಿ ಕುರಿಗಳ ಜೊತೆ ಹಾಗೂ ತೋಟ ಸುತ್ತುತ್ತಾ ಕಾಲ ಕಳೆದಿದ್ದೇನೆ. ಅನೇಕ ಬಾರಿ ಯೋಚನೆ ಮಾಡಿ ನನ್ನ ಬಳಿ ಇಲ್ಲದ್ದು, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಬಳಿ ಇರುವುದಾದರೂ ಏನು ಎಂದು ನನ್ನನ್ನು ನಾನೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ನೋವು ತೋಡಿಕೊಂಡರು.

- Advertisement -

‘ರಾತ್ರಿ 11 ಗಂಟೆಗೂ ಜನರ ಕಷ್ಟ ಆಲಿಸುತ್ತೇನೆ. ವಸತಿ ಯೋಜನೆಯಲ್ಲಿ ಮನೆಗಳಿಗೆ ಬಿಲ್ಲು ಆಗಲಿಲ್ಲ ಎಂದರೆ ಸಂಬಂಧಪಟ್ಟ ಅಧಿಕಾರಿ ಜೊತೆ ಮಾತನಾಡಿ ಸ್ಪಂದಿಸುತ್ತೇನೆ. ವಾಹನವನ್ನು ಪೊಲೀಸರು ಹಿಡಿದುಕೊಂಡರೆ ಮಾತನಾಡಿ ಅನುಕೂಲ ಮಾಡಿಕೊಡುತ್ತಿದ್ದೆ. ಈಗ ನೀವು ಯಾರ ಬಳಿ ಹೋಗಿ ಮಾತನಾಡುತ್ತೀರಿ ಎಂದು ಅವರು ಜನರನ್ನು ಪ್ರಶ್ನಿಸಿದರು.

Join Whatsapp