Home ಟಾಪ್ ಸುದ್ದಿಗಳು ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ: ಕಾಂಗ್ರೆಸ್

ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ: ಕಾಂಗ್ರೆಸ್

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿ ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡುತ್ತಿಲ್ಲ ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರಿ ಜಮೀನು ಒತ್ತುವರಿ ಕುರಿತಾಗಿ ಕೂಡಲೇ ತನಿಖೆ ನಡೆಸಿ ಆನಂದ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಒತ್ತಾಯಿಸಿದೆ.


‘ಕೂಡಲೇ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸಿ. ಈ ಕುರಿತು ಧ್ವನಿ ಎತ್ತಿದ ವ್ಯಕ್ತಿಗೆ ರಕ್ಷಣೆ ನೀಡಿ. ಅಕ್ರಮ ನಡೆಸಿದ ಸಚಿವರನ್ನು ವಜಾಗೊಳಿಸಿ. ನಿಮ್ಮ ‘ಪಾರದರ್ಶಕ’ ಆಡಳಿತವನ್ನು ತೋರಿಸಿ’ ಎಂದು ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಸವಾಲು ಹಾಕಿದೆ.

Join Whatsapp
Exit mobile version