ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ದಾಳಿ ನಡೆಸಿದ ಕಾಡುಕೋಣ

Prasthutha|

ಕೊಟ್ಟಿಗೆಹಾರ: ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಇಬ್ಬರು ಗಾಯಗೊಂಡಿರುವ ಘಟನೆ ಮತ್ತಿಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ.

- Advertisement -

ಮತ್ತಿಕಟ್ಟೆ ಸಮೀಪದ ಕಲ್ಯಾಣಗದ್ದೆಯ ದಿಲೀಪ್, ಆಶಾ ಗಾಯಗೊಂಡವರು.

ಮತ್ತಿಕಟ್ಟೆ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿದ್ದು ಬೈಕ್ ಸವಾರರು ಗಾಯಗೊಂಡಿದ್ದಾರೆ. ಕಾಡುಕೋಣ ದಾಳಿಗೆ ಬೈಕ್ ನಜ್ಜುಗುಜ್ಜಾಗಿದೆ.ಕೂಡಲೇ ಇಬ್ಬರು ಗಾಯಾಳುಗಳನ್ನು ಬಣಕಲ್ ನ ಖಾಸಗಿ ಆಸ್ಪತ್ರೆಗೆ ಕರೆದ್ಯೊಯ್ಯಲಾಗಿದ್ದು ಪ್ರಥಮ ಚಿಕಿತ್ಸೆ ನೀಡಿ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂಡಿಗೆರೆ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ಆಸ್ಪತ್ರೆಗೆ ವಲಯ ಅರಣ್ಯಾಧಿಕಾರಿ ಮೋಹನ್ ಭೇಟಿ ನೀಡಿದರು. ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಸಿನ್ ಇದ್ದರು.



Join Whatsapp