ಕಾಫಿನಾಡಲ್ಲಿ ಕಾಡಾನೆ ದಾಳಿ; ವ್ಯಕ್ತಿ ಬಲಿ

Prasthutha|

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾದ ಘಟನೆ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ  ನಡೆದಿದೆ.

- Advertisement -

ಆನಂದ್ ದೇವಾಡಿಗ (52) ಮೃತ ದುರ್ದೈವಿ. ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಲು ಹೋಗಿದ್ದಾಗ ದಾಳಿ ಮಾಡಿ ಕೊಂದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ.

ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನೊಳಗೆ ಅಲ್ಲಲ್ಲಿ ಚದುರಿ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ದೂರವಿದೆ.

- Advertisement -

ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ. ಮೃತದೇಹವನ್ನು ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದುರ್ಘಟನೆಯು ನಿನ್ನೆ ಸಂಜೆ  ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋದವರು  ಬರಬಹುದು ಎಂದು ಸುಮ್ಮನಾಗಿದ್ದರು. ಆದರೆ, ಬೆಳಗ್ಗೆ ಎಲ್ಲೂ ಕಾಣದಾಗ ಸ್ಥಳೀಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp