ಕಾಡಾನೆ ದಾಳಿ; ಮಹಿಳೆ ಮೃತ್ಯು

Prasthutha|

ರಾಮನಗರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಮೃತ ಮಹಿಳೆಯನ್ನು ಚೆನ್ನಮ್ಮ (55) ಎಂದು ಗುರುತಿಸಲಾಗಿದೆ. ಜಮೀನಿಗೆ ಕೆಲಸಕ್ಕೆ ತರಳುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.

ತೋಟದ ಮನೆಯಲ್ಲಿದ್ದ ಕೊಟ್ಟಿಗೆಗೆ ಮುಂಜಾನೆ 5.30ರ ವೇಳೆ ಚೆನ್ನಮ್ಮ ಹಾಲು ಕರೆಯಲು ತೆರಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿದೆ. ಅಲ್ಲದೆ, ಅವರನ್ನು ದೂರಕ್ಕೆ ಎಸೆದಿದ್ದು, ನಂತರ ತುಳಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ತೆಂಗಿನಕಲ್ಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ಆನೆ ದಾಳಿ ನಡೆಯುತ್ತಲೇ ಇದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಇದೀಗ ಮತ್ತೊಬ್ಬ ರೈತ ಮಹಿಳೆ ಬಲಿಯಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp