ರೈತರಿಗೆ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

Prasthutha|

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ವ್ಯಾಪ್ತಿಯ ರೈತರಿಗೆ ಉಪಟಳ ನೀಡುತ್ತಿದ್ದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಬೆಳಗ್ಗೆ ಸೆರೆಹಿಡಿದರು.

- Advertisement -

ಮೂರ್ನಾಲ್ಕು ತಿಂಗಳಿನಿಂದ ಪುಂಡಾನೆ ರೈತರ ಜಮೀನುಗಳಿಗೆ ನುಗ್ಗಿ ದಾಂದಲೆ ಮಾಡುತ್ತಿತ್ತು. ಅನೇಕ ರೈತರ ಬೆಳೆಗಳನ್ನು ನಾಶ ಮಾಡಿತ್ತು. ಇದರಿಂದಾಗಿ ಬೇಸತ್ತ ರೈತರು ಆನೆ ಸೆರೆಗೆ ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದರು.


ಒಂದು ವಾರದಿಂದ ಆನೆ ಸೆರೆಗೆ ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿತ್ತು.

Join Whatsapp