Home ಟಾಪ್ ಸುದ್ದಿಗಳು ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ !

ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ !

ಹಾಸನ: ಗ್ರಾಮಗಳಲ್ಲಿ ಪ್ರತ್ಯಕ್ಷವಾಗುತ್ತಿದ್ದ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಆಗಮಿಸಿದ್ದು, ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಆನೆ ದಾಟಿದೆ.


ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ.


ಇನ್ನೊಂದೆಡೆ ಸಕಲೇಶಪುರ ಪಟ್ಟಣದ ಸಮೀಪವೇ ಕಾಡಾನೆ ಬಂದಿದೆ. ಭತ್ತದ ಗದ್ದೆಯಲ್ಲಿ ಓಡಾಡಿ ಬೆಳೆಯನ್ನು ನಾಶ ಮಾಡಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version