ಬಿಜೆಪಿಯಲ್ಲಿ ಯಾರೇ ರಾಜ್ಯಾಧ್ಯಕ್ಷರಾದರೂ ಸಂತಸ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: 5 ತಿಂಗಳಾದ್ರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವೇಳೆ ಬಿಜೆಪಿಯಲ್ಲಿ ಟಿಕೆಟ್ ವ್ಯಾಪಾರ ನಡೆದಿದೆ. ಈಗಾಗಲೇ ಒಂದು ದೂರು ದಾಖಲಾಗಿದೆ ಎಂದು ಹೇಳಿದ್ದಾರೆ.


ನಿಗಮ ಮಂಡಳಿ ನೇಮಕ ವಿಚಾರವಾಗಿ ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಈ ಬಗ್ಗೆ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಮಾತನಾಡುತ್ತೇವೆ. ಸಿಎಂ, ನಾನು ಚರ್ಚೆ ನಡೆಸಿದ ಬಳಿಕ ದೆಹಲಿಯವರು ಆಗಮಿಸುತ್ತಾರೆ. ಶಾಸಕರು, ಕಾರ್ಯಕರ್ತರಿಗೆ ಆದಷ್ಟು ಬೇಗ ಅಧಿಕಾರ ಕೊಡುತ್ತೇವೆ ಎಂದು ಹೇಳಿದ್ದಾರೆ.

Join Whatsapp